ಕಾಮನ ಬಿಲ್ಲು ಮೂಡುತ್ತಿದೆ.. ಕಣ್ಣಿನ ಅಂಬರದಲ್ಲಿ..
ರಂಗನು ಕಾಣೊ ಆತುರದಿ.. ಸಂಜೆಯು ಹಾರಿದೆ ಬೇಲಿ..
ಹಾಡುಗಳಲ್ಲಿ ಅಮೃತ.. ವಿಡಿಯೋದಲ್ಲಿ ರತಿ ಮನ್ಮಥ.. ಇದು ಗುರುದೇಶಪಾಂಡೆ ನಿರ್ಮಾಣದ ಪೆಂಟಗನ್ ಚಿತ್ರದ ಹಾಡಿನ ಕಥೆ. ಐದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ಪೆಂಟಗನ್ ಸಿನಿಮಾದ 5 ನೇ ಕಥೆಯ ಟೀಸರ್ ಈಗಾಗಲೇ ಬಿಡುಗಡೆಯಾಗಿ ಸದ್ದು ಮಾಡಿದ್ದು, ಸಾಕಷ್ಟು ಚರ್ಚೆ ಕೂಡ ಆಗಿದೆ. ಇದೀಗ ಈ ಚಿದ್ರದಲ್ಲಿನ ಮೂರನೇ ಕಥೆಯ ‘ಕಾಮನಬಿಲ್ಲು ಮೂಡುತಿದೆ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ.
ಪೆಂಟಗನ್ ಸಿನಿಮಾದ ಈ ಕಥೆಯಲ್ಲಿ ಸಾಮಾಜಿಕ ಜಾಲತಾಣದ ಮೋಸ, ಅಪರಾಧ ಜಗತ್ತು, ಯವ ಪೀಳಿಗೆಯ ಭವಿಷ್ಯದ ಕುರಿತು ಬೆಳಕು ಚೆಲ್ಲುವ ಕಥೆಯಿದು. ರಾಘು ಶಿವಮೊಗ್ಗ ನಿರ್ದೇಶನದಲ್ಲಿ ಈ ಅಧ್ಯಾಯದಲ್ಲಿ ಪ್ರಕಾಶ್ ಬೆಳವಾಡಿ, ತನಿಷಾ ಕುಪ್ಪಂದ, ಪ್ರೇರಣಾ,ಸಾಗರ್,ರಾಕೇಶ ಇನ್ನು ಹಲವರು ಕಾಣಿಸಿಕೊಂಡಿದ್ದಾರೆ.
ಹಾಡಿನುದ್ದಕ್ಕೂ ಚುಂಬನದ ಆಟ.. ಬೆತ್ತಲೆ ನೋಟಗಳ ನಡುವೆ ಶೃಂಗಾರ ರಸವನ್ನೇ ಹರಿಸಿದ್ದಾರೆ. ನಾಗಾರ್ಜುನ ಶರ್ಮಾ ಅವರ ಸಾಹಿತ್ಯವಿದ್ದು, ಸಂತೋಷ್ ವೆಂಕಿ, ಇಂಚರ ರಾವ್ ಹಾಡಿದ್ದಾರೆ. ಈ ಅಧ್ಯಾಯಕ್ಕೆ ಕಿರಣ್ ಹಂಪಾಪುರ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ.