ಇಡೀ ರಾಜ್ಯವನ್ನು ನಡುಗಿಸಿರುವ, ಕಂಡು ಕೇಳರಿಯದ ಪ್ರವಾಹಕ್ಕೆ ಹಲವೆಡೆಇಯಿಂದ ಪರಿಹಾರ ಧನ ಹರಿದು ಬರುತ್ತಿದೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂ. ನೀಡಲು ತೀರ್ಮಾನಿಸಿದೆ. ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ನೇತೃತ್ವದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
ರಾಜ್ಯದ ಅದರಲ್ಲೂ ವಿಶೇಷವಾಗಿ ಉ.ಕರ್ನಾಟಕದ ಜನರು ಪ್ರವಾಹದಿಂದ ನಲುಗಿರುವುದು ನೋವು ತಂದಿದೆ. ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎಂದಿದ್ದಾರೆ ಜೈರಾಜ್. ಶೀಘ್ರದಲ್ಲೇ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಚೆಕ್ ನೀಡುತ್ತೇವೆ ಎಂದು ತಿಳಿಸಿದ್ದಾರೆ.