` ಪುಷ್ಕರಣಿಯಲ್ಲಿ ನಟಸಾರ್ವಭೌಮ ಶೂಟಿಂಗ್‍ಗೆ ಅಡ್ಡಿ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
natasarwabhowma movie shooting in trouble
Natasarvabhowma Image

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಚಿತ್ರೀಕರಣಕ್ಕೆ ಬಾಗಲಕೋಟೆಯಲ್ಲಿ ಅಪಸ್ವರ ಕೇಳಿಬಂದಿದೆ. ಬಾಗಲಕೋಟೆಯ ಬಾದಾಮಿಯಲ್ಲಿರೋ ಮಹಾಕೂಟೇಶ್ವರ ಪುಷ್ಕರಿಣಿಯಲ್ಲಿ ನಟಸಾರ್ವಭೌಮ ಚಿತ್ರತಂಡ ಸೆಟ್ ಹಾಕಿ ಚಿತ್ರೀಕರಣ ಮಾಡುತ್ತಿದೆ. ಆದರೆ, ಈ ಶೂಟಿಂಗ್ ವೇಳೆ ಪುಷ್ಕರಣಿಯಲ್ಲಿರುವ ನೀರನ್ನು ಹೊರಹಾಕಿ ಸೆಟ್ ಹಾಕಲಾಗಿದೆ ಅನ್ನೋದು ಗ್ರಾಮಸ್ಥರ ಆರೋಪ. ಏಕೆಂದರೆ, ಈ ಪುಷ್ಕರಣಿ, ಸ್ಥಳೀಯರಿಗೆ ಜಲಮೂಲ. ಈ ಪುಷ್ಕರಣಿಯಲ್ಲಿ ನೀರು ಬತ್ತುವುದಿಲ್ಲ. ಈ ಪುಷ್ಕರಣಿಯಿಂದಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ಅಂತರ್ಜಲ ಚೆನ್ನಾಗಿದೆ. 

ಹೀಗಿರುವಾಗ ಪುಷ್ಕರಣಿಯನ್ನು ಡಿಗ್ಗಿಂಗ್ ಮಾಡಿ, ನೀರನ್ನು ಹೊರತೆಗೆದು ಸೆಟ್ ಹಾಕಿದರೆ, ಅಂತರ್ಜಲಕ್ಕೆ ಸಮಸ್ಯೆಯಾಗುತ್ತೆ ಅನ್ನೋದು ಸ್ಥಳೀಯರ ಆತಂಕ. ಈ ಕುರಿತು ನಿರ್ದೇಶಕ ಪವನ್ ಒಡೆಯರ್ ಸ್ಪಷ್ಟನೆ ಕೊಟ್ಟಿದ್ದಾರೆ. ಐತಿಹಾಸಿಕ ಸ್ಥಳಗಳ ಬಗ್ಗೆ ನಮಗೂ ಗೌರವ ಇದೆ. ಕಾಳಜಿ ಇದೆ. ಈ ಪ್ರದೇಶವನ್ನು ಇನ್ನಷ್ಟು ಚೆನ್ನಾಗಿ ತೋರಿಸಬೇಕು ಅನ್ನೋದು ನಮ್ಮ ಆಸೆ. ಪುಷ್ಕರಣಿಗೆ, ಅಂತರ್ಜಲಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ, ಆತಂಕ ಬೇಡ ಎಂದು ಭರವಸೆ ಕೊಟ್ಟಿದ್ದಾರೆ.