ಶೃತಿ ಹರಿಹರನ್ ಬೆಂಬಲಕ್ಕೆ ನಟ ಪ್ರಕಾಶ್ ರೈ ನಿಂತಿದ್ದಾರೆ. ಶೃತಿ ಹರಿಹರನ್ ಅವರ ನೋವನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ಅರ್ಜುನ್ ಸರ್ಜಾ ದೊಡ್ಡತನ ಮೆರೆದು ಕ್ಷಮೆ ಕೇಳುವುದು ಒಳ್ಳೆಯದು. ಅದು ದೊಡ್ಡತನದ ಲಕ್ಷಣ ಎಂದಿದ್ದಾರೆ ಪ್ರಕಾಶ್ ರೈ.
ಶೃತಿ ಹರಿಹರನ್ ವಿಚಾರ ಕುರಿತಂತೆ ಪ್ರಕಾಶ್ ರೈ, ಅರಿತೋ ಅರಿಯದೆಯೋ.. ನಾವು ಗಂಡಸರು ಹೆಣ್ಣು ಮಕ್ಕಳ ಬೇಕು ಬೇಡಗಳ ಬಗ್ಗೆ ಸೂಕ್ಷ್ಮತೆ ಕಳೆದುಕೊಂಡಿದ್ದೇವೆ. ಈ ಮೀಟೂ ಅಭಿಯಾನ ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ಅವಮಾನ.. ದೌರ್ಜನ್ಯಗಳಿಗೆ ಅಂತ್ಯ ಹಾಡಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ ಪ್ರಕಾಶ್ ರೈ.