ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್, ಸಂತೋಷ್ ಆನಂದರಾಮ್, ವಿಜಯ ಕಿರಗಂದೂರು ಕಾಂಬಿನೇಷನ್ನಿನ ಸಿನಿಮಾ ಯುವರತ್ನ. ಆ ಚಿತ್ರಕ್ಕೆ ಈಗಾಗಲೇ ಘಟಾನುಘಟಿಗಳು ಆಯ್ಕೆಯಾಗಿದ್ದಾರೆ. ಈಗ ಆ ಘಟಾನುಘಟಿಗಳ ತಂಡಕ್ಕೆ ಹಿರಿಯ ನಿರ್ದೇಶಕ ಭಗವಾನ್ ಸೇರಿಕೊಂಡಿದ್ದಾರೆ.
ಕನ್ನಡಕ್ಕೆ ಹಲವಾರು ಗ್ರೇಟ್ ಚಿತ್ರಗಳನ್ನು ನೀಡಿರುವ ಭಗವಾನ್ಗೆ ಆ್ಯಕ್ಷನ್ ಹೇಳುತ್ತಿರುವುದು ನನ್ನ ಸೌಭಾಗ್ಯ ಎಂದಿದ್ದಾರೆ ನಿರ್ದೇಶಕ ಸಂತೋಷ್ ಆನಂದರಾಮ್. ಚಿತ್ರದ ಮೊದಲ ಹಂತದ ಶೂಟಿಂಗ್ ಮುಗಿದಿದೆ.