ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿದ್ದಾರೆ. ಇಂದು ನಡೆಯಲಿರುವ ಏರ್ ಶೋ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬಂದು ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ಮೋದಿ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಕರ್ನಾಟಕದ ಕೆಲವು ಗಣ್ಯರ ಜೊತೆ ಔತಣಕೂಟ ಏರ್ಪಡಿಸಿದ್ದು, ಹಲವರು ಔತಣಕೂಟದಲ್ಲಿ ಭಾಗಿಯಾಗಿದ್ದಾರೆ. ವಿಜಯ್ ಕಿರಗಂದೂರು, ರಿಷಭ್ ಶೆಟ್ಟಿ, ಪ್ರಶಾಂತ್ ನೀಲ್, ಯಶ್, ಅಶ್ವಿನಿ ಪುನೀತ್ ರಾಜಕುಮಾರ್, ಆರ್.ಜೆ.ಶ್ರದ್ಧಾ, ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್, ಕುಂಬ್ಳೆ ದಂಪತಿ, ಜಾವಗಲ್ ಶ್ರೀನಾಥ್, ಮಯಾಂಕ್ ಅಗರ್ವಾಲ್, ಮನೀಷ್ ಪಾಂಡೆ, ಉದ್ಯಮ ವಲಯದಿಂದ ನಿತಿನ್ ಕಾಮತ್, ತರುಣ್ ಮೆಹ್ತಾ ಸೇರಿ ಇತರರಿಗೆ ಆಹ್ವಾನವಿತ್ತು.
ಕಾಂತಾರಾ ಸಿನಿಮಾ ನಿರ್ಮಾಣ ಕುರಿತು ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, 20 ನಿಮಿಷಗಳ ಕಾಲ ರಾಜ್ಯದ ಪ್ರಸಕ್ತ ಬೆಳವಣಿಗೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಸಿನಿಮಾ ಕ್ಷೇತ್ರದ ಬೆಳವಣಿಗೆಯಲ್ಲಿ ಸರ್ಕಾರಗಳ ಸಹಕಾರಕ್ಕೆ ಬದ್ಧ ಎಂದ ಪ್ರಧಾನಿ, ನಿರೀಕ್ಷೆಗಳೇನಾದರೂ ಇದೆಯಾ ಎಂದು ಕೇಳಿದ್ದಾರೆ. ನಂತರ ಕ್ರೀಡಾ ಕ್ಷೇತ್ರದ ಗಣ್ಯರ ಜೊತೆಗೆ ಮೋದಿ ಮಾತುಕತೆ ನಡೆಸಿದ್ದಾರೆ. ಮೋದಿ ಅವರೊಂದಿಗೆ ಭೋಜನಕೂಟದಲ್ಲಿ ಭಾಗಿಯಾದ ಪಿಎಂಓ ಕಚೇರಿ ಅಧಿಕಾರಿಗಳು ನಂತರ ಪ್ರಧಾನಿ ರಾಜಭವನದ ಸಿಬ್ಬಂದಿ ಜೊತೆಗೆ ಪೋಟೋ ತೆಗೆಸಿಕೊಂಡಿದ್ದಾರೆ.